ಸಾಂವಿಧಾನಿಕ ಕರ್ತವ್ಯಗಳನ್ನು ಎತ್ತಿಹಿಡಿಯುವಂತೆ ಕರೆ ನೀಡಿರುವ ಪ್ರಧಾನ ಮಂತ್ರಿಗಳು ಅವು ಬಲವಾದ ಮತ್ತು ಚೈತನ್ಯಶೀಲ ಪ್ರಜಾಪ್ರಭುತ್ವದ ಮೂಲಾಧಾರ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬುಧವಾರ ದೇಶದ ಜನತೆಗೆ ಕರೆ ನೀಡಿದ್ದಾರೆ.
ಸಂವಿಧಾನ ದಿನದಂದು ದೇಶದ ನಾಗರಿಕರಿಗೆ ಬರೆದ ಪತ್ರದಲ್ಲಿ ಅವರು, ಮತದಾನದ ಹಕ್ಕನ್ನು ಸಕ್ರಿಯವಾಗಿ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸುವ ಸಾಮೂಹಿಕ ಜವಾಬ್ದಾರಿಯನ್ನು ಒತ್ತಿ ಹೇಳಿದರು. 18 ವರ್ಷ ತುಂಬಿದ ಮೊದಲ ಬಾರಿಗೆ ಮತದಾನ ಮಾಡುವವರನ್ನು ಗೌರವಿಸುವ ಮೂಲಕ ಶಾಲಾ- ಕಾಲೇಜುಗಳು ಈ ಸಂದರ್ಭವನ್ನು ಆಚರಿಸಬೇಕೆಂದು ಅವರು ಸೂಚಿಸಿದರು.
ಕರ್ತವ್ಯಗಳ ನೆರವೇರಿಕೆಯಿಂದ ಹಕ್ಕುಗಳು ಉದ್ಭವಿಸುತ್ತವೆ ಎಂಬ ಮಹಾತ್ಮ ಗಾಂಧಿಯವರ ನಂಬಿಕೆಯನ್ನು ನೆನಪಿಸಿಕೊಂಡ ಪ್ರಧಾನಿ, ಈ ಜವಾಬ್ದಾರಿಗಳನ್ನು ನಿರ್ವಹಿಸುವುದು ಭಾರತದ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಅತ್ಯಗತ್ಯ ಎಂದು ಹೇಳಿದರು.

0 Comments
Await For Moderation ; Normally we don't allow Comments