Header Ads Widget

Responsive Advertisement

'ಹೀಗೆ ಮಾಡಿದ್ರೆ...' ಅಜಿತ್ ಪವಾರ್ ತೊಂದರೆಗೆ ಸಿಲುಕುತ್ತಾರೆ: ಡಿಸಿಎಂಗೆ ಮಹಾ ಬಿಜೆಪಿ ಅಧ್ಯಕ್ಷ ವಾರ್ನ್ ಮಾಡಿದ್ದೇಕೆ?

 


ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು NCP ಮುಖ್ಯಸ್ಥ ಅಜಿತ್ ಪವಾರ್ ಅವರು ಇತ್ತೀಚೆಗೆ ಕೇಸರಿ ಪಕ್ಷದ ವಿರುದ್ಧ ನೀಡಿದ್ದ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ, ಆರೋಪಗಳನ್ನು ಮಾಡುವ ಮೊದಲು ಅವರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದೆ.


ಪುಣೆಯ ಪಿಂಪ್ರಿ-ಚಿಂಚ್‌ವಾಡ್‌ದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅಜಿತ್ ಪವಾರ್ ನೀಡಿದ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ರವೀಂದ್ರ ಚವಾಣ್, ಪವಾರ್ ಅವರು ಅಂತಹ ಹೇಳಿಕೆಗಳನ್ನು ನೀಡುವಾಗ ಅವರು ಯಾವ ಪಕ್ಷವನ್ನು ಉಲ್ಲೇಖಿಸುತ್ತಿದ್ದಾರೆ ಎಂಬುದನ್ನು ಪರಿಶೀಲಿಸಬೇಕು ಎಂದರು.


ಪಿಂಪ್ರಿ ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಬಿಜೆಪಿ ಅಧಿಕಾರಾವಧಿಯಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದ್ದು, ಪಾಲಿಕೆಯ ಖಜಾನೆ ಬರಿದಾಗಿದೆ ಎಂದು ಅಜಿತ್ ಪವಾರ್ ಆರೋಪಿಸಿದ್ದಾರೆ.

Post a Comment

0 Comments